ಸೈಂಟ್ ಮೇರಿಸ್ ಶಾಲೆಯಲ್ಲಿ ಶಿಕ್ಷಕ- ರಕ್ಷಕ ಸಂಘದ ಸಭೆ

0

ಉಪ್ಪಿನಂಗಡಿ: ಇಲ್ಲಿನ ಸೈಂಟ್ ಮೇರಿಸ್ ಶಾಲೆಯಲ್ಲಿ ರಕ್ಷಕ- ಶಿಕ್ಷಕ ಸಂಘದ ಮಹಾ ಸಭೆ ನಡೆಯಿತು.


ಸಂಪನ್ಮೂಲ ವ್ಯಕ್ತಿ ವಂ. ಫಾ. ಆಂಟನಿ ಪ್ರಕಾಶ್ ಮೊಂತೇರೋ ಮಾತನಾಡಿ, ಪೋಷಕರಲ್ಲಿ ಪೋಷಕತ್ವ ಜಾಗೃತವಾಗಿರಬೇಕು. ಮಕ್ಕಳಿಗೆ ಸಮಯವನ್ನು ಮೀಸಲಿಟ್ಟು, ಅವರ ಸರಿ- ತಪ್ಪುಗಳನ್ನು ವಿಮರ್ಶೆ ಮಾಡುವ ಕೆಲಸ ಪೋಷಕರಿಂದ ನಡೆಯಬೇಕು ಎಂದರು.


2024-25ನೇ ಸಾಲಿನ ನೂತನ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ ಶ್ರೀಧರ ಮಠಂದೂರು ಅವರನ್ನು ಆಯ್ಕೆ ಮಾಡಲಾಯಿತು ಹಾಗೂ ಪ್ರತಿ ತರಗತಿಯಿಂದ ಓರ್ವ ವಿದ್ಯಾರ್ಥಿಯ ಪೋಷಕರನ್ನು ಸಂಘದ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.


ವೇದಿಕೆಯಲ್ಲಿ ವಂ. ಫಾ. ಜೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಮೇರಿ ಡಯಾನ ವೇಗಸ್ ಸ್ವಾಗತಿಸಿದರು. ಲೌಸಿ ವಂದಿಸಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here