ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟ – ರಾಮಕುಂಜ ಆ.ಮಾ.ಶಾಲೆಗೆ ಹಲವು ಪ್ರಶಸ್ತಿ

0

ರಾಮಕುಂಜ: ಮಂಗಳೂರು ಶಾರದಾ ವಿದ್ಯಾಲಯದ ನೇತೃತ್ವದಲ್ಲಿ ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟವು ಆ.18ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು.
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಿಂದ ಬಾಲವರ್ಗ ಹಾಗೂ ಕಿಶೋರ ವರ್ಗದ ಬಾಲಕರು ಮತ್ತು ಬಾಲಕಿಯರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಬಾಲವರ್ಗ (14 ವರ್ಷದ ಒಳಗಿನ) ವಿಭಾಗದಲ್ಲಿ 2 ಪ್ರಥಮ, 4 ದ್ವಿತೀಯ ಹಾಗೂ 4 ತೃತೀಯ ಸ್ಥಾನ ಹಾಗೂ ಕಿಶೋರ ವರ್ಗ (17 ವರ್ಷದ ಒಳಗಿನ) ವಿಭಾಗದಲ್ಲಿ 10 ಪ್ರಥಮ, 6 ದ್ವಿತೀಯ ಹಾಗೂ 6 ತೃತೀಯ ಸ್ಥಾನ ಪಡೆದುಕೊಂಡು ಸೆ.1 ಮತ್ತು 2ರಂದು ಬೀದರ್‌ನ ನೇತಾಜಿ ಸರಸ್ವತಿ ವಿದ್ಯಾಸಂಸ್ಥೆಯಲ್ಲಿ ನಡೆಯುವ ಪ್ರಾಂತೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ಕಾರ‍್ಯದರ್ಶಿ ಕೆ.ಸೇಸಪ್ಪ ರೈ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ ಬಿ, ರಾಘವ್ ಹಾಗೂ ದಿವ್ಯಾ ಪಿ.ಎನ್ ರವರು ತರಬೇತಿ ನೀಡಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್ ಟಿ, ವ್ಯವಸ್ಥಾಪಕ ರಮೇಶ್ ರೈ ಆರ್ ಬಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಯು ಎನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ ಎ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕಾರ ನೀಡಿದ್ದರು.

LEAVE A REPLY

Please enter your comment!
Please enter your name here