ಚೆಸ್: ಕಡ್ಯ ಕೊಣಾಜೆ ಶಾಲೆಯ ತೀರ್ಥ ಕೆ., ರಾಜ್ಯಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಳ್ತಂಗಡಿ ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕಡ್ಯ ಕೊಣಾಜೆ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ತೀರ್ಥ ಕೆ. ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈಕೆ ಶಾಲಾ ಎಸ್‌ಡಿಎಂಸಿ ಸದಸ್ಯ ರಾಮಣ್ಣ ಆಚಾರಿ ಗುಜ್ಜಲ ಹಾಗೂ ಅಡುಗೆ ಸಿಬ್ಬಂದಿ ಪ್ರೇಮಲತಾ ಇವರ ಪುತ್ರಿ. ಮುಖ್ಯಶಿಕ್ಷಕ ರಾಮಕೃಷ್ಣ ಕೆ., ಎಸ್‌ಡಿಎಂಸಿ ಅಧ್ಯಕ್ಷ ವಾಸುದೇವ ಕೆ. ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here