ಶ್ರೀ ಕೃಷ್ಣ ಯುವಕ ಮಂಡಲ ಕುಂಟ್ಯಾನ ಇದರ ವತಿಯಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

0

ಪುತ್ತೂರು: ಶ್ರೀ ಕೃಷ್ಣ ಯುವಕ ಮಂಡಲ ,ಕುಂಟ್ಯಾನ, ಸೇಡಿಯಾಪು -ಬನ್ನೂರು, ಇದರ ವತಿಯಿಂದ ಆ.26ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆಯೆಂದು ಪ್ರಕಟಣೆ ತಿಳಿಸಿದೆ.

ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನೆರವೇರಲಿದ್ದು , ಶ್ರೀ ಸದಾಶಿವ ದೇವಸ್ಥಾನ ಕುಂಟ್ಯಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಹಲಂಗ ಉದ್ಘಾಟಿಸಲಿರುವರು.
9.30ರಿಂದ ಆಟೋಟ ಸ್ಪರ್ಧೆಗಳು ನಡೆಯಲಿದ್ದು , ಮಧ್ಯಾಹ್ನ 1.00ಕ್ಕೆ ಸರಿಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರಾಮಣ್ಣ ಗೌಡ ಹಲಂಗ ಇವರು ವಹಿಸಲಿದ್ದು , ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ರಾಜಶೇಖರ್ ಜೈನ್ ನೀರ್ಪಾಜೆ, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ, ಉಪಾಧ್ಯಕ್ಷ ಶೀನಪ್ಪ ಕುಲಾಲ್ ಬದಿಯಡ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶ್ರೀಕೃಷ್ಣ ಯುವಕ ಮಂಡಲ ಇದರ ಅಧ್ಯಕ್ಷ , ಎಲ್.ಎನ್.ಟಿ ಲ್ಯಾಡರ್ ಮಾಲೀಕ ತಿಲಕ್, ಕಾರ್ಯದರ್ಶಿ ಎಂ ಕೆ ಸುಬ್ರಹ್ಮಣಿ ಅಡೆಂಚಿಲಡ್ಕ, ಗೌರವ ಸಲಹೆಗಾರ ಸುಬ್ರಹ್ಮಣ್ಯ ದಾಸ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆ ತಿಳಿಸಿದೆ.

ವೇದಿಕೆಯಲ್ಲಿ ಸನ್ಮಾ
ಈ ಮೊಸರು ಕುಡಿಕೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣೆ ಕಾರ್ಯವು ನಡೆಯಲಿದ್ದು, ಕ್ರೀಡಾಪಟುಗಳು , ಕ್ರೀಡಾ ಪ್ರೇಮಿಗಳು ಹಾಗೂ ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here