ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ – ನಿಖರವಾದ ಬೆಳೆ ದಾಖಲಾತಿಗೆ ರೈತರಿಗೊಂದು ಸುವರ್ಣಾವಕಾಶ

0

ಪುತ್ತೂರು: 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ರೈತರು ತಮ್ಮ ಅಂಡ್ರಾಯ್ಡ್ ಮೊಬೈಲಿನ ಮೂಲಕ ತಮ್ಮ ಜಮೀನಿನ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್‌ನ್ನು ಅಭಿವೃದ್ಧಿಪಡಿಸಲಾಗಿದೆ.

ರೈತರು Google Play Store ¤AzÀ https://play.google.com/store/apps/details id=com.csk.Khariffarmer23_24.cropsurvey ಈ ಲಿಂಕ್ ಬಳಸಿ ಅಥವಾ ಕೆಳಗೆ ನೀಡಿದ QR code ಬಳಸಿ Kharif Season Farmer Crop Survey 2024-25 ಆಪ್‌ನ್ನು ಡೌನ್‌ಲೋಡ್ ಮಾಡಬೇಕು. ಬಳಿಕ ಪಹಣಿ ಪತ್ರದಲ್ಲಿ ಹೆಸರಿರುವ ರೈತರ ಆಧಾರ್‌ನಲ್ಲಿರುವಂತೆ ಆಪ್‌ನಲ್ಲಿ ಮಾಹಿತಿಯನ್ನು ದಾಖಲಿಸಿದಾಗ, ಆಧಾರ್‌ಗೆ ಜೋಡಣೆಯಾದ ಮೊಬೈಲ್ ಸಂಖ್ಯೆಗೆ ಬಂದ ಔಖಿP ಯನ್ನು ದಾಖಲಿಸಿ ತದನಂತರ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯ ಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಬಳಿಕ OTP ಯನ್ನು ದಾಖಲಿಸಬೇಕು. ಆಗ ರೈತ ನೋಂದಣೆ ಸಂಖ್ಯೆ (ಎಪ್.ಐ.ಡಿ)ಯಲ್ಲಿರುವಂತೆ ಸರ್ವೆ ನಂಬರ್ ಬರಲಿದ್ದು, ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೊಟೊ ತೆಗೆದು ಮಾಹಿತಿನ್ನು ಅಪ್‌ಲೋಡ್ ಮಾಡಬೇಕು. ರೈತ ನೋಂದಣಿ ಸಂಖ್ಯೆಯನ್ನು ಪಡೆಯಲು ಆಧಾರ್, ಆರ್.ಟಿ.ಸಿ ಹಾಗೂ ಬ್ಯಾಂಕ್ ಪಾಸ್‌ಬುಕ್ ನಕಲು ಪ್ರತಿಯೊಂದಿಗೆ ಸಮೀಪದ ರೈತ ಸಂಪರ್ಕ, ತೋಟಗಾರಿಕೆ ಇಲಾಖೆ, ಹತ್ತಿರದ ಗ್ರಾಮ ವನ್ ಕೇಂದ್ರಗಳನ್ನು ಸಂಪರ್ಕಿಸಬಹುದು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಾಕೃತಿಕ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು, ಪ್ರಯೋಗ ಅನುಷ್ಠಾನ, ಕೃಷಿ/ ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು. ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರಕಾರದಿಂದ ಸುವರ್ಣವಕಾಶವನ್ನು ಕಲ್ಪಿಸಲಾಗಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು. ದ.ಕ.ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2024ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿ ಗೊಳಿಸಬೇಕೆಂದು ಪುತ್ತೂರು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಲಿಂಕ್ ಬಳಸಿ ಅಥವಾ ಈ QR code ಬಳಸಿ ಮೊಬೈಲ್ ಆಪ್ ಡೌನ್‌ಲೋಡ್ ಮಾಡಬಹುದು.

LEAVE A REPLY

Please enter your comment!
Please enter your name here