ಪುಣ್ಚಪ್ಪಾಡಿ: 1843ನೇ ಮದ್ಯವರ್ಜನ ಶಿಬಿರ -ಗ್ರಾಮಾಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ಸದಸ್ಯರಿಂದ ವಿವಿಧ ಸೇವೆ

0

ನೆಲ್ಯಾಡಿ: ಕಡಬ ತಾಲೂಕಿನ ಪುಣ್ಚಪ್ಪಾಡಿಯಲ್ಲಿ ನಡೆಯುತ್ತಿರುವ 1843ನೇ ಮದ್ಯವರ್ಜನ ಶಿಬಿರದ ಎರಡನೇ ದಿನವಾದ ಆ.23ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ಇದರ ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಜನಜಾಗೃತಿ ವೇದಿಕೆ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ಘಟಕದ ಸ್ವಯಂ ಸೇವಕರು, ವಲಯದ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು ವಿವಿಧ ಕೆಲಸಗಳಲ್ಲಿ ತೊಡಗಿಕೊಂಡರು.



ಇದೇ ವೇಳೆ ನೆಲ್ಯಾಡಿ ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರ ಸಭೆ ನಡೆಯಿತು. ಸಭೆಯಲ್ಲಿ ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಜನಜಾಗೃತಿ ವೇದಿಕೆ ಮೇಲ್ವಿಚಾರಕ ನಿತೇಶ್, ನೆಲ್ಯಾಡಿ ವಲಯದ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಸದಸ್ಯರಾದ ತುಕಾರಾಮ ರೈ, ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್, ವಲಯ ಮೇಲ್ವಿಚಾರಕ ಆನಂದ್ ಡಿ.ಬಿ., ಘಟಕ ಪ್ರತಿನಿಧಿ ರಮೇಶ್ ಬಾಣಜಾಲು, ಘಟಕ ಸಂಯೋಜಕಿ ನಮಿತಾ ಶೆಟ್ಟಿ, ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here