ಬಜತ್ತೂರು-ಮುದ್ಯ: 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸೆ.7ರಂದು ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಆ.23ರಂದು ಮುದ್ಯ ಶ್ರೀ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಪುತ್ತೂರು ಹಾಗೂ ಉಪ್ಪಿನಂಗಡಿಯ ಕಲ್ಪತರು ಆಯಿಲ್‌ಮಿಲ್‌ನ ಮಾಲಕ ಬಾಲಕೃಷ್ಣ ನಾಯಕ್ ಪೊರೋಳಿ ಆಮಂತ್ರಣ ಪತ್ರ ಬಿಡಗುಡೆಗೊಳಿಸಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೃಷ್ಣಪ್ರಸಾದ್ ಉಡುಪ ಪೂಜಾ ವಿಧಿವಿಧಾನ ನೆರವೇರಿಸಿದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಶೇಖರ ಪೂಜಾರಿ ಶಿಬಾರ್ಲಗುತ್ತು ಮಾತನಾಡಿ, ಗಣೇಶೋತ್ಸವದಲ್ಲಿ ಗ್ರಾಮದ ಎಲ್ಲಾ ಭಕ್ತರು ಪಾಲ್ಗೊಂಡು ತನು-ಮನ-ಧನದೊಂದಿಗೆ ಸಹಕರಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಗಣೇಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲ ವಳಾಲುದಡ್ಡು ಸ್ವಾಗತಿಸಿ, ಕಾರ್ಯದರ್ಶಿ ಧನಂಜಯ ಬಾರಿಕೆ ವಂದಿಸಿದರು. ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಮಾಜಿ ಪದಾಧಿಕಾರಿಗಳು, ದೇವಸ್ಥಾನದ ಬೈಲುವಾರು ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು, ಕೋಶಾದಿಕಾರಿಗಳು, ಊರಿನ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here