ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ- ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಖೋ-ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ತಂಡದಲ್ಲಿ ದ್ವಿತೀಯ ಪಿಯುಸಿಯ ಜಿಷ್ಣು ಪ್ರಕಾಶ್‌, ಗುರುಕಿರಣ್‌, ಕೌಶಲ್‌,ಓಂಕಾರ್‌ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನಿಶ್‌, ಚಿಂತನ್‌,ಭವಿಷ್‌, ಸೃಜನ್‌,ತರುಣ್‌, ಮಿಥುನ್,ತೇಜಸ್‌.ಪಿ.ಕೆ, ಮನ್ವಿತ್‌,ಗೌತಮ್‌,ವೇದಾಂತ್‌,ಪ್ರೇಕ್ಷಿತ್‌, ದೀಪಕ್‌, ಸೃಜನ್‌ ಭಾಗವಹಿಸಿದ್ದರು.ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here