ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 353ನೇ ಆರಾಧನಾ ಮಹೋತ್ಸವ

0

ಪುತ್ತೂರು: ಕಲ್ಲಮ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 353ನೇ ಆರಾಧನಾ ಮಹೋತ್ಸವ ಆ.20ರಿಂದ ಆ.22ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಮಧ್ಯಾರಾಧನೆಯ ದಿನ ಜಯರಾಜ್ ಸುವರ್ಣ ನೇತೃತ್ವದಲ್ಲಿ ಅರ್ಧ ಏಕಾಹ ಭಜನೆ ಹಾಗೂ ಗಮಕ ಕಾರ್ಯಕ್ರಮ ನಡೆಯಿತು. ಗಮಕ ಕಾರ್ಯಕ್ರಮವನ್ನು ಮೇಧಾ ಅಶೋಕ್ ಮತ್ತು ಸುಜಲ ಎಸ್.ಎನ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಮಂದಿ ಭಕ್ತಾಧಿಗಳು ಭಾಗವಹಿಸಿದ್ದರು. ಕಲ್ಲಮ ಮಠದ ವ್ಯವಸ್ಥಾಪಕರಾದ ಡಾ.ಸೀತರಾಮ ಭಟ್ ಅವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here