ಆ.26: ಆರ್ಲಪದವಿನಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ- ವಿವಿಧ ಸ್ಪರ್ಧೆಗಳು

0

ನಿಡ್ಪಳ್ಳಿ: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಪಾಣಾಜೆ ಇದರ ಆಶ್ರಯದಲ್ಲಿ 18 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.26ರಂದು ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 8.30 ಕ್ಕೆ ಯಾದವ ಸಭಾ ಕೇಂದ್ರೀಯ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷೆ ಶುಭಲಕ್ಷ್ಮೀ ಆರ್ಲಪದವು ಉದ್ಘಾಟಿಸಲಿರುವರು.
ಬೆಳಿಗ್ಗೆ ಗಂಟೆ 8.30 ಕ್ಕೆ ಗಣಹೋಮ, ಗಂಟೆ 9 ರಿಂದ ವಿವಿಧ ಭಜನಾ ಸಂಘದಿಂದ ಭಜನಾ ಕಾರ್ಯಕ್ರಮ. ಗಂಟೆ 11 ಕ್ಕೆ ಶ್ರೀಕೃಷ್ಣಾರ್ಪಣ ಪೂಜೆ, 12.30 ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 12.45 ಕ್ಕೆ ಪಲ್ಲಪೂಜೆ ಮಧ್ಯಾಹ್ನ ಗಂಟೆ 1 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಬೆಳಿಗ್ಗೆ 11 ಗಂಟೆಯಿಂದ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ, ಮಹಿಳೆಯರಿಗೆ ಹೂಮಾಲೆ ಕಟ್ಟುವ ಸ್ಪರ್ಧೆ ನಡೆಯಲಿದೆ. ಸಂಜೆ ಗಂಟೆ 3ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಶಾಲಾ ಮಕ್ಕಳಿಂದ ಝೆಂಕಾರ- 2024 ನಡೆಯಲಿದೆ.  ಸಂಜೆ ಗಂಟೆ 4 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಲಿದ್ದು, ಅನೇಕ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here