ನಾಳೆ(ಆ.27): ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ

0

ಪುತ್ತೂರು: ನರಿಮೊಗರು ಗ್ರಾಮದ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶ್ರೀ ಕೃಷ್ಣ ಲೀಲೋತ್ಸವ ಆ.27 ರಂದು ಗೋಪಾಲಕೃಷ್ಣ ಸಭಾಭವನದಲ್ಲಿ ನಡೆಯಲಿದೆ.

ಪ್ರಗತಿಪರ ಕೃಷಿಕ ರತ್ನಾಕರ ವಾರಂಬಳಿತ್ತಾಯ ಪಂಜಿಗರವರು ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಅಧ್ಯಕ್ಷ ಶಿಬರ ಜಯರಾಮ ಕೆದಿಲಾಯ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಅತಿಥಿಗಳಾಗಿ ಉದ್ಯಮಿ ವೆಂಕಟರಮಣ ಭಟ್ ದೇರ್ಕಜೆ ಕುರಿಯ, ಪೋಷಕರಾದ ಹಾಸನ ಜಿಲ್ಲಾ ಪೊಲೀಸ್ ಕಛೇರಿಯ ಶಾಖಾ ಅಧೀಕ್ಷಕ ನಂಜುಂಡೇ ಗೌಡ ಎ.ಎಲ್ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ರಿಂದ ವಿದ್ಯಾರ್ಥಿಗಳಿಗೆ ಪೋಷಕರಿಗೆ, ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ವಿಶೇಷ ಭೋಜನದ ವ್ಯವಸ್ಥೆ ಇರಲಿದೆ. ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್.ಜಯರಾಮ ಕೆದಿಲಾಯ, ಸಂಚಾಲಕ ಎಚ್.ಭಾಸ್ಕರ ಆಚಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮುಖ್ಯಗುರು ಜಯಮಾಲಾ ವಿ.ಎನ್., ವಿದ್ಯಾರ್ಥಿ ನಾಯಕ ಪ್ರತೀಕ್ಷ ಎನ್.ಎಸ್ ಮತ್ತು ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ಶಿಕ್ಷಕೇತರ ವೃಂದದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here