ಸುಳ್ಯಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ

0

ಬಡಗನ್ನೂರು: ಸುಳ್ಯಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆ.26 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ  ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮಗಳಿಗೆ ಮುರಳಿಧರ್ ಭೋಗಲ್ಕರ್ ಮರದ ಮೂಲೆ ಚಾಲನೆ ನೀಡಿ ಶುಭ ಹಾರೈಸಿದರು. 

ಮಕ್ಕಳಿಗೆ ಮುದ್ದು ಕೃಷ್ಣ ವೇಷ, ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ  ವಿವಿಧ ಸ್ಪರ್ಧೆಗಳು ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ,ಪ್ರಸಾದ ಭೋಜನ ನಂತರ ಸಾರ್ವಜನಿಕರಿಗೆ ಕಬ್ಬಡಿ ಪಂದ್ಯಾಟ ನಡೆಯಿತು.

ಶ್ರೀ ಅಯ್ಯಪ್ಪ ಭಜನಾ ಮಂದಿರ ಅಡಳಿತ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ಕಡಮಗದ್ದೆ,  ಟ್ರಸ್ಟ್ ನ ಅಧ್ಯಕ್ಷ ಶ್ರೀಪತಿ ಭಟ್ ಇಂದಾಜೆ  ಎರಡು ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಸಾವಿರಕ್ಕೂ ಹೆಚ್ಚು ಜನರು ಅನ್ನಪ್ರಸಾದ  ಭೋಜನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here