ಕಬಕ ಮಹಾದೇವಿ ಯುವಕ ಮಂಡಲದ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಶ್ರೀ ಮಹಾದೇವಿ ಯುವಕ ಮಂಡಲ ಕಬಕ ಇದರ ಬೆಳ್ಳಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಲ್ಲಿನ ಶ್ರೀ ಮಹಾದೇವಿ ಕಲಾಮಂದಿರದಲ್ಲಿ ನಡೆಯಿತು.

ಶ್ರೀ ಮಹಾದೇವಿ ಮಹಿಳಾ ಮಂಡಲ ಸಹಕಾರದಲ್ಲಿ ಬೆಳ್ಳಿ ಹಬ್ಬದ ಕಾರ್ಯಕ್ರಮದ ಅಂಗವಾಗಿ ಸೆ.8ರಂದು ಕೆಸರಡ್ ಒಂಜಿ ದಿನ ಮತ್ತು ಸೆ.29ರಂದು ಯುವಕ ಮಂಡಲದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ವಿ. ಚಂದ್ರಶೇಖರ ನಾಯ್ಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶ್ರೀ ಮಹದೇವೀ ಧರ್ಮಸೇವಾ ವಿಶ್ವಸ್ತ ಮಂಡಳಿಯ ಕೋಶಾಧಿಕಾರಿ ಜತ್ತಪ್ಪ ಗೌಡ ಅಡ್ಯಾಲು, ಬೆ. ಹ. ಸ. ಯ ಉಪಾಧ್ಯಕ್ಷ ಕೃಷ್ಣಪ್ಪ ಅಡ್ಯಾಲು, ಪ್ರಧಾನ ಕಾರ್ಯದರ್ಶಿ ಜಯರಾಮ್ ನೆಕ್ಕರೆ, ಯು.ಮ. ದ ಅಧ್ಯಕ್ಷ ರಕ್ಷಿತ್ ಅಡ್ಯಾಲು, ಕಾರ್ಯದರ್ಶಿ ಯತೀಶ್ ಪದ್ನಡ್ಕ ಉಪಸ್ಥಿತರಿದ್ದರು. ಬಾಲಕೃಷ್ಣ ಅನುಗ್ರಹ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here