ಆ.30:ತಾ.ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

0

ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ 2023-24ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಎಸೆಸ್ಸೆಲ್ಸಿ, ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಸನ್ಮಾನ ಕಾರ್ಯಕ್ರಮವು ಆ.30 ರಂದು ಅಪರಾಹ್ನ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಲಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಅಧ್ಯಕ್ಷ ಶಿವಾನಂದ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಲೋಕೋಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಾರಾಮ್ ಬಿ, ಪುತ್ತೂರು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ಗೌರವ ಉಪಸ್ಥಿತಿಯಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಕೆ ಹಾಗೂ ಮೌರಿಸ್ ಮಸ್ಕರೇನ್ಹಸ್ ರವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಕೋಶಾಧಿಕಾರಿ ಕೃಷ್ಣ ಬಿ, ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ, ಗೌರವಾಧ್ಯಕ್ಷ ರಾಮಚಂದ್ರ, ಹಿರಿಯ ಉಪಾಧ್ಯಕ್ಷ ಹರಿಪ್ರಕಾಶ್ ಬೈಲಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀಳ್ಕೋಡುಗೆ ಸನ್ಮಾನ..
ಈ ಸಂದರ್ಭದಲ್ಲಿ ನಿವೃತ್ತ ಜಾನುವಾರು ಅಭಿವೃದ್ಧಿ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಉಪಾಧ್ಯಕ್ಷ ಹೊನ್ನಪ್ಪ ಗೌಡ ಹಾಗೂ ಕರ್ನಾಟಕ ರಾಜ್ಯ ಸರಕಾರಿ ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ಕಾರ್ಯಕಾರಿ ಸಮಿತಿಯ ಸದಸ್ಯ ಗಿರಿಧರ್ ಗೌಡರವರನ್ನು ಬೀಳ್ಕೋಡುಗೆ ಸನ್ಮಾನ ಜರಗಲಿದೆ.

LEAVE A REPLY

Please enter your comment!
Please enter your name here