ಚೆಸ್- ಅಂಬಿಕಾದ ತ್ರಿಶೂಲ್ ಎನ್ ಡಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ (ಶಾಲಾ ಶಿಕ್ಷಣ) ಹಾಗೂ ಮಂಗಳೂರಿನ ಬಾಸ್ಕೊ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯದಲ್ಲಿ ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ತ್ರಿಶೂಲ್ ಎನ್.ಡಿ. ನಾಲ್ಕನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಪುತ್ತೂರು ಹಾರಾಡಿಯ ದಾಮೋದರ ಎನ್ ಮತ್ತು ನವೀನ ಕುಮಾರಿ ಕೆ.ಎಸ್. ದಂಪತಿಯ ಪುತ್ರ.

LEAVE A REPLY

Please enter your comment!
Please enter your name here