ಎಡನೀರು ಶ್ರೀ ಚಾತುರ್ಮಾಸ್ಯದಲ್ಲಿ ನೃತ್ಯೋಪಾಸನಾ ವೈಭವ

0

ಪುತ್ತೂರು: ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನ ಶ್ರೀಎಡನೀರು ಮಠದಲ್ಲಿ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಚತುರ್ಥ ಚಾತುರ್ಮಾಸ್ಯ ವ್ರತಾಚರಣೆ ಸಲುವಾಗಿ
ಶ್ರೀಮಠದ ಭಾರತೀ ಕಲಾ ಸದನದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ಮಂಗಳವಾರ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ನಡೆಯಿತು.


ನೃತ್ಯಗುರು, ವಿದುಷಿ ಶಾಲಿನಿ ಆತ್ಮಭೂಷಣ್‌ ನಿರ್ದೇಶನದಲ್ಲಿ ಕಲಾ ಅಕಾಡೆಮಿಯ ಕಲಾವಿದರು ನೃತ್ಯ ವೈವಿಧ್ಯ ನಡೆಸಿಕೊಟ್ಟರು. ಈ ಸಂದರ್ಭ ಶ್ರೀಸಚ್ಚಿದಾನಂದ ಭಾರತೀ
ಶ್ರೀಪಾದಂಗಳವರು ಕಲಾವಿದರಿಗೆ ಮಂತ್ರಾಕ್ಷತೆ ನೀಡಿ ಹರಸಿದರು.


ಹಿರಿಯ ಭಾಗವತ ಸತ್ಯನಾರಾಯಣ ಪುಣಿಚಿತ್ತಾಯ ಸ್ವಾಗತಿಸಿದರು. ಪೂರ್ಣಿಮಾ ಭಟ್‌ ಪರಿಚಯಿಸಿದರು. ವಿದುಷಿ ಅನುಪಮಾ ಉಡುಪಮೂಲೆ ವಂದಿಸಿದರು.

LEAVE A REPLY

Please enter your comment!
Please enter your name here