ಪುಣಚ ಶ್ರೀದೇವಿ ಶಿಶುಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ಶಿಶುಮಂದಿರದ ವತಿಯಿಂದ ಆ.26ರಂದು ಶ್ರೀದೇವಿ ವಿದ್ಯಾಕೇಂದ್ರದ ನಮೋಭಾರತಿ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು.


ಸಭಾಧ್ಯಕ್ಷತೆಯನ್ನು ವಹಿಸಿದ್ದ ವಿಟ್ಲ ರೋಟರಿ ಕ್ಲಬ್ ನ ಅಧ್ಯಕ್ಷ ಹರೀಶ್ ಪೂಜಾರಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯಿಯವರು ಶ್ರೀಕೃಷ್ಣನ ಆದರ್ಶಗಳನ್ನು ಉಲ್ಲೇಖಿಸಿ, ಸಭೆಗೆ ಆಶೀರ್ವಚನ ನೀಡಿ, ಕೃಷ್ಣ-ರಾಧೆಯರ ವೇಷಭೂಷಣಗಳಿಂದ ಕಂಗೊಳಿಸುತ್ತಿದ್ದ ಮಕ್ಕಳನ್ನು ಕಂಡು ಕಲಿಯುಗದಲ್ಲಿ ದ್ವಾಪರಯುಗದ ದರ್ಶನವಾಯಿತೆಂದು ಹರ್ಷ ವ್ಯಕ್ತಪಡಿಸಿದರು. ಶ್ರೀದೇವಿ ಶಿಶುಮಂದಿರದ ವ್ಯವಸ್ಥಾಪಕಿ ಗಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಜನಿ ಧನ್ಯವಾದ ಸಮರ್ಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಮಾತಾಜಿಯರಾದ ನಳಿನಾಕ್ಷಿ ಮತ್ತು ಲೀಲಾವತಿ ಕಾರ್ಯಕ್ರಮ ಸಂಯೋಜಿಸಿದರು. ಶಿಶುಮಂದಿರದ ಪುಟಾಣಿಗಳು ರಾಧಾ-ಕೃಷ್ಣ ವೇಷ ತೊಟ್ಟು ಸಂಭ್ರಮಿಸಿದರು. ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಕೃಷ್ಣ-ಸುಧಾಮ ಕಿರು ನಾಟಕ ಪ್ರಸ್ತುತ ಪಡಿಸಿದರು. ಕಾರ್ಯಕ್ರಮದಲ್ಲಿ ಶ್ರೀದೇವಿ ವಿದ್ಯಾಕೇಂದ್ರದ ಹಾಗೂ ಶ್ರೀದೇವಿ ಶಿಶುಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here