ಪುತ್ತೂರು ಬಿಜೆಪಿ ಮಂಡಲದ ನೂತನ ನಿಯೋಜಿತ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಸ್ತಾಂತರ

0

ಪುತ್ತೂರು: ಪುತ್ತೂರು ಬಿಜೆಪಿ ಮಂಡಲದ ನೂತನ ನಿಯೋಜಿತ ಅಧ್ಯಕ್ಷರುಗಳಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಆ.29ರಂದು ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಬಿಜೆಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಪುತ್ತೂರು ಮಂಡಲದ ಪ್ರಭಾರಿ ಪ್ರೇಮಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪುತ್ತೂರು ಬಿಜೆಪಿ ಮಂಡಲದ ನಿರ್ಗಮನ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ನೂತನ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮತ್ತು ನಗರ ಮಂಡಲದ ನಿರ್ಗಮನ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ನೂತನ ಅಧ್ಯಕ್ಷ ಶಿವ ಕುಮಾರ್ ಅವರಿಗೆ ಮಂಡಲದ ದಾಖಲೆ ಪುಸ್ತಕವನ್ನು ನೀಡಿ ಜವಾಬ್ದಾರಿ ಹಸ್ತಾಂತರಿಸಿದರು.

ಈ ಸಂದರ್ಭ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದಶಿ ಆರ್.ಸಿ.ನಾರಾಯಣ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಕಾರ್ಯದರ್ಶಿ ವಿದ್ಯಾ ಗೌರಿ, ಪುರುಷೊತ್ತಮ ಮುಂಗ್ಲಿಮನೆ, ಜಯಶ್ರೀ ಎಸ್ ಶೆಟ್ಟಿ, ನೂತನ ಪ್ರಧಾನ ಕಾರ್ಯದರ್ಶಿಗಳಾದ ನಾಗೇಶ್ ಪ್ರಭು, ಅನಿಲ್ ತೆಂಕಿಲ, ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾನಿ, ಚನಿಲ ತಿಮ್ಮಪ್ಪ ಶೆಟ್ಟಿ, ಕೆ.ಜೀವಂಧರ್ ಜೈನ್, ಹರಿಪ್ರಸಾದ್ ಯಾದವ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here