ಹೆಚ್ಚುವರಿ ಚಾಲಕ, ನಿರ್ವಾಹಕರನ್ನು ನೇಮಿಸುವಂತೆ ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

0

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ, ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ, ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ‌ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ ಯವರು ಮನವಿ ಸಲ್ಲಿಸಿದ್ದಾರೆ.


ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನು‌ ಭೇಟಿಯಾದ ಶಾಸಕರು ಪುತ್ತೂರು ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಬಸ್ ಸಂಚಾರ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡುವಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದೆ. ಬಸ್ ಇದ್ದರೂ ಚಾಲಕರ ಕೊರತೆಯಿಂದ ಗ್ರಾಮೀಣ ಭಾಗಕ್ಕೆ ಬಸ್ ಓಡಾಟ ನಡೆಸಲು ಅಸಾಧ್ಯವಾಗಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಿಸುವಂತೆ ಸಚಿವರಲ್ಲಿ‌ ಮನವಿ ಸಲ್ಲಿಸಿದ್ದಾರೆ.

ಅಂತರರಾಜ್ಯ ಬಸ್ ಸಂಚಾರಕ್ಕೆ ಮನವಿ
ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಪುತ್ತೂರಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ ಮಾಡಲು ಇಲಾಖೆಯಿಂದ ಅನುಮತಿ‌ ನೀಡುವಂತೆಯೂ ಸಚಿವರಲ್ಲಿ‌ ಮನವಿ‌ ಸಲ್ಲಿಸಿದರು.

LEAVE A REPLY

Please enter your comment!
Please enter your name here