ಕಾವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

0

ಕಾವು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಆ.26ರಂದು ನಡೆಯಿತು.

ಕ್ರೀಡಾಕೂಟವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನನ್ಯ ಅಚ್ಚುತ ಮೂಡಿತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಸಮಿತಿಯ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕೋಶಾಧಿಕಾರಿ ಕೃಷ್ಣ ಪ್ರಸಾದ್ ಕೊಚ್ಚಿ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು, ಮಾಜಿ ಅಧ್ಯಕ್ಷ ಲೋಕೇಶ್ ಚಾಕೋಟೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಪುರುಷರಿಗೆ, ಮಹಿಳೆಯರಿಗೆ,ಮಕ್ಕಳಿಗೆ ವಿವಿಧ ಕ್ರೀಡಾಕೂಟ ನಡೆಯಿತು.


ಮುದ್ದು ರಾಧ-ಕೃಷ್ಣ ವೇಷ ಸ್ಪರ್ಧೆ
ಪುಟಾಣಿ ಮಕ್ಕಳಿಗೆ ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಮುದ್ದು ರಾಧ- ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಗೆಳೆಯರ ಬಳಗದ ನಾರಾಯಣ ಆಚಾರ್ಯ ಮಳಿ,ಮತ್ತು ಸದಸ್ಯರು ಕಾರ್ಯಕ್ರಮ ನಿರ್ವಹಿಸಿದರು.

ಸಮಾರೋಪ ಕಾರ್ಯಕ್ರಮ, ಬಹುಮಾನ ವಿತರಣೆ
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷ ನನ್ಯ ಅಚ್ಚುತ ಮೂಡಿತ್ತಾಯ, ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ, ಮಾಜಿ ಅಧ್ಯಕ್ಷ ಲೋಕೇಶ್ ಚಾಕೋಟೆ, ಕೋಶಾಧಿಕಾರಿ ಕೃಷ್ಣಪ್ರಸಾದ್ ಕೊಚ್ಚಿ, ಮಾಜಿ ಸದಸ್ಯರಾದ ಬಾಲಮುರಳಿ ಸಸ್ಪೆಟ್ಟಿ, ನಾರಾಯಣ ಆಚಾರ್ಯ ಮಳಿ, ದೈಹಿಕ ಶಿಕ್ಷಣ ಶಿಕ್ಷಕಿ ಸೌಮ್ಯ ಬಹುಮಾನ ವಿತರಣೆ ಮಾಡಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು ಬಹುಮಾನ ಪಟ್ಟಿ ವಾಚಿಸಿದರು. ಸದಸ್ಯ ಯೋಗೀಶ್ ಕಾವು ವಂದಿಸಿದರು, ಸಮಿತಿ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here