ವಿನಾಯಕನಗರ: ಸಿದ್ಧಿವಿನಾಯಕ ಮಂದಿರದಿಂದ ನಿವೃತ್ತ ಶಿಕ್ಷಕ ವಿಷ್ಣು ಭಟ್ ರವರಿಗೆ ಅಭಿನಂದನೆ

0

ಬೆಟ್ಟಂಪಾಡಿ: ಇಲ್ಲಿನ ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ವತಿಯಿಂದ ಇತ್ತೀಚೆಗೆ ನಿವೃತ್ತರಾದ ಕಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ  ವಿಷ್ಣು ಭಟ್ ಎಂ. ರವರನ್ನು ಅಭಿನಂದಿಸಲಾಯಿತು.

ವಿಷ್ಣು ಭಟ್ ಮತ್ತು ರುಕ್ಮಿಣಿ ಎಸ್. ದಂಪತಿಯನ್ನು ಭಜನಾ ಮಂದಿರದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಗೌರವಿಸಿದರು. ಶ್ರೀ ಸಿದ್ಧಿವಿನಾಯಕ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಕುಲಾಲ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ರೈ, ಹಿರಿಯರಾದ ಸಾಂತಪ್ಪ ಗೌಡ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here