ಬಪ್ಪಳಿಗೆಯ Ambika ಪದವಿಪೂರ್ವ ವಿದ್ಯಾಲಯದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

0

ಪುತ್ತೂರು: ಒಬ್ಬೊಬ್ಬನ ಕೆಲಸ ಕಾರ್ಯಗಳ ಹಿಂದೆಯೂ ಅವನದೇ ಆದ ಆಲೋಚನೆಗಳಿರುತ್ತವೆ ಹಾಗೂ ಆಲೋಚನೆಗಳಿಗೆ ತಕ್ಕಂತೆ ಕೆಲಸಗಳು ರೂಪುಗೊಳ್ಳುತ್ತವೆ. ಆದ ಕಾರಣ ನಮ್ಮ ಆಲೋಚನೆಗಳನ್ನು ಅತ್ಯಂತ ಜಾಗ್ರತೆಯಿಂದ ಬಹಳ ಉನ್ನತ ಮಟ್ಟದಲ್ಲಿ ಅದ್ವಿತೀಯವಾಗಿ ರೂಪಿಸಿಕೊಳ್ಳಬೇಕು. ಜತೆಗೆ ಸಮಯ, ಆಲೋಚನೆ ಮತ್ತು ಮನಸ್ಸಿನ ಮೇಲೆ ಸ್ವನಿಯಂತ್ರಣ ಸಾಧಿಸಿದಾಗ ಅದ್ಭುತ ಯಶಸ್ಸು ನಮ್ಮದಾಗುತ್ತದೆ ಎಂದು ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಹೇಳಿದರು.

ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಆ.29ರಂದು ನಡೆದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜ್ಞಾನವನ್ನು ವಿಭಿನ್ನವಾಗಿ ಯಾವುದೇ ಅನುಕರಣೆ ಇಲ್ಲದೆ ವ್ಯಕ್ತಪಡಿಸುವ ಕಲೆ ಕರಗತ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಸುಚಿತ್ರ ಪ್ರಭು, ಉಪ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ಉಪಸ್ಥಿತರಿದ್ದರು. ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here