ಸೆ.2 : ಮಣಿಕ್ಕರ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

0

ಪುತ್ತೂರು : ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ದ.ಕ.ಜಿ.ಪಂ., ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ಮಣಿಕ್ಕರ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೆ.2ರಂದು ಬೆಳಿಗ್ಗೆ 9ರಿಂದ ನಡೆಯಲಿದೆ.

ಪಂದ್ಯಾಟವನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಉದ್ಘಾಟಿಸುವರು.ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಅಕ್ಕಮ್ಮ ಅಧ್ಯಕ್ಷತೆ ವಹಿಸುವರು.ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಕ್ರೀಡಾಂಗಣ ಉದ್ಘಾಟಿಸುವರು. ಅತಿಥಿಗಳಾಗಿ ಕೊಳ್ತಿಗೆ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ.ಎಸ್,ಸದಸ್ಯರಾದ ಶುಭಲತಾ ಜೆ.ರೈ,ಸುಂದರ ಪಿ.ಬಿ.,ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್.,ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ,ಸಿಆರ್‌ಪಿ ಪ್ರಸಾದ್ ಹಾಗೂ ವಿವಿಧ ಗಣ್ಯರು ಗೌರವ ಉಪಸ್ಥಿತರಿರುವರು.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕೊಳ್ತಿಗೆ ಗ್ರಾ.ಪಂ.ಉಪಾಧ್ಯಕ್ಷ ಪ್ರಮೋದ್ ಕೆ.ಎಸ್.ವಹಿಸುವರು.ವಿವಿಧ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪಂದ್ಯಾಟ ಸಮಿತಿ ಅಧ್ಯಕ್ಷ ವೆಂಕಪ್ಪ ಗೌಡ ನಾರ್ಕೋಡು ಪೆರ್ಜಿ, ಎಸ್.ಡಿ.ಎಂ.ಸಿ.ಕಾರ್ಯಾಧ್ಯಕ್ಷ ಸಯ್ಯದ್ ಗಫೂರ್ ಸಾಹೇಬ್ ಪಾಲ್ತಾಡು, ಮುಖ್ಯ ಶಿಕ್ಷಕಿ ನಳಿನಿ ಕೆ.,ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಮಣಿಯಾಣಿ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಸಲಾಂ,ವಿದ್ಯಾರ್ಥಿ ನಾಯಕ ಮಹಮ್ಮದ್ ಐರಾಝ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here