ಪ್ರತಿಭಾಕಾರಂಜಿ-ಸುಳ್ಯಪದವಿನ ಕ್ಷಿತಿ ಹಾಗೂ ಹರಿಸೂರ್ಯ ತಾಲೂಕು ಮಟ್ಟಕ್ಕೆ ಆಯ್ಕೆ

0

ಬಡಗನ್ನೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇಲ್ಲಿ ನಡೆದ 2024 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆ ಅಭಿವ್ಯಕ್ತ -2024ರಲ್ಲಿ  ಕಿರಿಯರ ವಿಭಾಗದಲ್ಲಿ ಸುಳ್ಯಪದವು ಶ್ರೀ ಬಾಲಸುಬ್ರಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿಧ್ಯಾರ್ಥಿನಿ  ಕ್ಷಿತಿ. ಕೆ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಕನ್ನಡ್ಕ ನಿವಾಸಿ ರಾಘವ ಹಾಗೂ ಅನಿತಾ ದಂಪತಿಗಳ ಪುತ್ರಿ.

ಹಾಗೂ, ಕಿರಿಯರ ವಿಭಾಗದ ಕ್ಲೇ ಮಾಡೆಲಿಂಗ್ ನಲ್ಲಿ ಇದೇ ಶಾಲೆಯ ವಿದ್ಯಾರ್ಥಿ  ಹರಿಸೂರ್ಯ. ಕೆ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಕನ್ನಡ್ಕ ನಿವಾಸಿ ಉದಯಕುಮಾರ್ ಹಾಗೂ ಭವ್ಯ ದಂಪತಿಗಳ ಪುತ್ರ.

LEAVE A REPLY

Please enter your comment!
Please enter your name here