ಸೆ.7: ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗಣಪತಿಹೋಮ, ಸೀಯಾಳಾಭಿಷೇಕ

0

ಪುತ್ತೂರು: ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗಣೇಶಚತುರ್ಥಿಯ ಅಂಗವಾಗಿ ಸೆ.7ರಂದು ಗಣಪತಿಹೋಮ ಮತ್ತು ಶ್ರೀ ದೇವರಿಗೆ ವಿಶೇಷ ಸೀಯಾಳಾಭಿಷೇಕ ನಡೆಯಲಿದೆ. ಬಳಿಕ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದ್ದು ಇದೇ ಸಂದರ್ಬ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ.

ಬೆಳಿಗ್ಗೆ ಗಂಟೆ 10 ರಿಂದ 12ರ ತನಕ ಪುರುಷರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೆಚ್.ರಾಮಣ್ಣ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here