ಬನ್ನೂರು ಶ್ರೀ ಶಿವಪಾರ್ವತಿ ಮಂದಿರದಲ್ಲಿ ಮೊಸರು ಕುಡಿಕೆ ಉತ್ಸವ ಉದ್ಘಾಟನೆ

0

ಪುತ್ತೂರು: ಬನ್ನೂರು ಶ್ರೀ ಶಿವಪಾರ್ವತಿ ಮಂದಿರ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 42ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಸೆ.1ರಂದು ಬನ್ನೂರು ಶ್ರೀ ಶಿವಪಾರ್ವತಿ ಮಂದಿರದ ವಠಾರದಲ್ಲಿ ನಡೆಯಿತು.


ವಿಟ್ಲ ಪೊಲೀಸ್ ಠಾಣೆಯ ಎ.ಎಸ್.ಐ ತಿಮ್ಮಯ್ಯ ಗೌಡ ಅವರು ವಿವಿಧ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಶ್ರೀ ಶಿವಪಾರ್ವತಿ ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು ಅಧ್ಯಕ್ಷತೆ ವಹಿಸಿದ್ದರು. ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ರತ್ನಾಕರ ರೈ, ಕಾರ್ಯದರ್ಶಿ ಪ್ರದೀಪ್ ಗೌಡ, ಕೋಶಾಧಿಕಾರಿ ಯದುಕುಲೇಶ್, ನಗರಸಭೆ ಸದಸ್ಯೆ ಮೋಹಿನಿ ವಿಶ್ವನಾಥ್, ರಾಧಾ, ಗೀತಾ ಉಪಸ್ಥಿತರಿದ್ದರು. ರಾಧಾಕೃಷ್ಣ ಗೌಡ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಉದ್ಘಾಟನೆ ಕಾರ್ಯಕ್ರಮದ ಬಳಿಕ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here