ಬೆಳಂದೂರು ಕಾಲೇಜಿನಲ್ಲಿ ಪದವಿ ವ್ಯಾಸಂಗದ ಕುರಿತು ಅಭಿವಿನ್ಯಾಸ ಕಾರ್ಯಕ್ರಮ,ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

ಬೆಳಂದೂರು: ಬೆಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶವು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪದವಿ ವ್ಯಾಸಂಗದ ಕುರಿತು ಅಭಿವಿನ್ಯಾಸ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ಳಾರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಯತೀಶ್ ಕುಮಾರ್ ವಿಶೇಷ ಉಪನ್ಯಾಸ ನೀಡಿ, ಪದವಿ ಹಂತದಲ್ಲಿ ಸ್ವಪ್ರಜ್ಞೆ, ಅರಿವುಗಳನ್ನು ಬೆಳೆಸಿಕೊಳ್ಳಬೇಕಾದುದರ ಅಗತ್ಯ, ವರ್ತಮಾನದಲ್ಲಿನ ಅಂತರ್ಜಾಲದ ಬಳಕೆಯ ಇತಿಮಿತಿಗಳು,ಭವಿಷ್ಯದ ಬದುಕಿಗೆ ಮಾಡಿಕೊಳ್ಳಬೇಕಾದ ತಯಾರಿಗಳು,ಮಾನವೀಯ ಮೌಲ್ಯಗಳ ಮಹತ್ವಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭ ಏರ್ಪಡಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಶಂಕರ ಭಟ್ ಪಿ ವಹಿಸಿದ್ದರು, ವೇದಿಕೆಯಲ್ಲಿ ದ. ಕ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಮನಮೋಹನ, ರಾಜ್ಯಶಾಸ್ತ್ರ ಉಪನ್ಯಾಸಕಿ ಹರಿಣಾಕ್ಷಿ, ಇತಿಹಾಸ ಸಹಾಯಕ ಪ್ರಾಧ್ಯಾಪಕ ಸ್ವಾಮಿ.ಎಸ್, ಆಂಗ್ಲಭಾಷಾ ಸಹಾಯಕ ಪ್ರಾಧ್ಯಾಪಕ ಹನುಂತ ಗೌಡ ಡಿ.ಎಂ ಉಪಸ್ಥಿತರಿದ್ದರು. ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು. ಸ್ಮಿತಾ ಸ್ವಾಗತಿಸಿ ,ರಂಜಿತ್ ವಂದಿಸಿದರು.

LEAVE A REPLY

Please enter your comment!
Please enter your name here