ಸೆ.3: ಇಡ್ಕಿದು ಸೇವಾ ಸಹಕಾರಿ ಸಂಘದ ‘ಶತಾಮೃತ’ದ ಅವರಣದಲ್ಲಿ ಉಚಿತ ವೈದ್ಯಕೀಯ ಶಿಬಿರ

0

ವಿಟ್ಲ: ಇಡ್ಕಿದು ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಇದರ ಸಹಭಾಗಿತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರವು ಸೆ.3ರಂದು ಉರಿಮಜಲಿನಲ್ಲಿರುವ ಇಡ್ಕಿದು ಸೇವಾ ಸಹಕಾರಿ ಸಂಘದ ‘ಶತಾಮೃತ’ದ ಅವರಣದಲ್ಲಿ ನಡೆಯಲಿದೆ.

ಈ ಶಿಬಿರದಲ್ಲಿ ಕ್ಯಾನ್ಸರ್ ರೋಗ ಮಾಹಿತಿ ಮತ್ತು ತಪಾಸಣೆ, ಕಿಡ್ನಿ ಮತ್ತು ಮೂತ್ರರೋಗ ಎಲುಬು ಮತ್ತು ಕೀಲು, ಕಿವಿ ಮೂಗು ಗಂಟಲು, ಕಣ್ಣಿನ ಪರೀಕ್ಷೆ, ಸ್ತ್ರೀ ರೋಗ ತಪಾಸಣೆ, ಹೃದಯ ರೋಗ ಮತ್ತು ಇ.ಸಿ.ಜಿ., ಸಾಮಾನ್ಯ ರೋಗ (ಬಿಪಿ ಮತ್ತು ಶುಗರ್) ಪರೀಕ್ಷೆ ನಡೆಯಲಿದೆ.

ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ‌. ಇಡ್ಕಿದು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಿ. ಸುಧಾಕರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಇಡ್ಕಿದು‌ ಗ್ರಾ.ಪಂ ಅಧ್ಯಕ್ಷರಾದ ಮೋಹಿನಿ ಜಯಕರ, ಪುತ್ತೂರು ಸಿಟಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಮಹಮ್ಮದ್ ಸಾಹೇಬ್, ಉರಿಮಜಲು ನಮನ ಕ್ಲಿನಿಕ್ ನ ವೈದ್ಯರಾದ ಡಾ. ಕೀರ್ತನ್ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9632664279, 9482081261ನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಈ ಶಿಬಿರದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here