ಮಣಿಕರ : ಹಿ.ಪ್ರಾ.ಶಾಲೆ ಎಸ್.ಡಿ.ಎಂ.ಸಿ. ರಚನೆ

0

ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ನೆಟ್ಟಾರ್ ,ಉಪಾಧ್ಯಕ್ಷರಾಗಿ ಮೋನಪ್ಪ ನಾಗನಮಜಲು

ಪುತ್ತೂರು : ಕೊಳ್ತಿಗೆ ಗ್ರಾಮದ ಮಣಿಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿಯ ನೂತನ ಸಮಿತಿಯನ್ನು ರಚಿಸಲಾಯಿತು.


ಪೋಷಕರ ಸಭೆಯ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಅಬ್ದುಲ್ ರಹೀಂ ವಹಿಸಿದ್ದರು. ಈ ಸಂದರ್ಭದಲ್ಲಿ ಕೊಳ್ತಿಗೆ ಗ್ರಾಮ ಪಂಚಾಯತ್ ಸದಸ್ಯರಾದ ಶುಭಲತಾ ಜೆ ರೈ ಹಾಗೂ ಸುಂದರ ಪಿ.ಬಿ. ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ವಿಶಾಲಾಕ್ಷಿ ಕೆ ಸಭೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್.ಡಿ.ಎಂ.ಸಿ.ಸಮಿತಿಯ ರಚನೆಗೆ ಅನುಸರಿಸಬೇಕಾದ ಆಯ್ಕೆಯ ಮಾನದಂಡಗಳನ್ನು ಸವಿವರವಾಗಿ ತಿಳಿಸಿದದರು. ಬಳಿಕ ಪೋಷಕರ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ನೆಟ್ಟಾರ್ ಉಪಾಧ್ಯಕ್ಷರಾಗಿ ಮೋನಪ್ಪ ನಾಗನಮಜಲು ಇವರು ಆಯ್ಕೆಗೊಂಡರು. ‌ನೂತನವಾಗಿ ಆಯ್ಕೆಗೊಂಡ ಎಸ್.ಡಿ.ಎಂ.ಸಿ. ಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ಸಭೆಯಲ್ಲಿ ಶಾಲಾ ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆ, ಪೋಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here