ಮಹಿಳೆಗೆ ದೌರ್ಜನ್ಯ ಪ್ರಕರಣ : ಪುತ್ತೂರು ಇನ್ ಸ್ಪೆಕ್ಟರ್ ಸತೀಶ್ ಜಿ ಜೆ ನೇತೃತ್ವದಲ್ಲಿ ಬೆಂಗಳೂರು ಹೋಟೆಲೊಂದರಲ್ಲಿ ಮಹಜರು!

0

ಪುತ್ತೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸತೀಶ್ ಜಿ ಜೆ ಅವರ ನೇತೃತ್ವದಲ್ಲಿ ಬೆಂಗಳೂರು ಹೊಟೇಲೊಂದರಲ್ಲಿ ಮಹಜರು ನಡೆಯಿತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಸಂತ್ರಸ್ತ ಮಹಿಳೆಯನ್ನು ಸೆ.2 ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನಲಾದ ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಹೋಟೇಲ್ ಗೆ ತೆರಳಿ ಸೆ.3 ರಂದು ಬೆಳಿಗ್ಗೆ ಮಹಜರು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here