ಬಡಗನ್ನೂರು: ಉಚಿತ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ  ಪುತ್ತೂರು  ಬಿ ಸಿ  ಟ್ರಸ್ಟ್  ಇದರ ವತಿಯಿಂದ  ಸೆ. 22 ರಂದು ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪೂರ್ವಭಾವಿ ಸಭೆಯು ಸೆ.3 ರಂದು ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ ರವರ ಅಧ್ಯಕ್ಷತೆಯಲ್ಲಿ  ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ  ಕಾವ್ಯಶ್ರಿ ಆಚಾರ್ಯ ಉಚಿತ ಅರೋಗ್ಯ ತಪಾಸಣಾ ಶಿಬಿರದ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಬಳಿಕ ಕಾರ್ಯಕ್ರಮದ ರೂಪುರೇಷೆ  ತಯಾರಿಸಲಾಯಿತು.

ಕಾರ್ಯಕ್ರಮದಲ್ಲಿ ಬಡಗನ್ನೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ, ಉಪಾಧ್ಯಕ್ಷೆ  ಸುಶೀಲಾ ಪಕ್ಯೋಡ್ ,ಅರಿಯಡ್ಕ ವಲಯ ಮೇಲ್ವಿಚಾರಕ ಹರೀಶ್ ಕುಮಾರ್, ಅರಿಯಡ್ಕ ವಲಯ  ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ  ಶಿವಶಂಕರ  ಕುಲಾಲ್ ಬಡಗನ್ನೂರು ಒಕ್ಕೂಟದ ಸದಸ್ಯ ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

 ಬಡಗನ್ನೂರು ಒಕ್ಕೂಟದ ಸೇವಾ ಪ್ರತಿನಿಧಿ ಸಾವಿತ್ರಿ ಪೊನ್ನೆತ್ತಡ್ಕ ಸ್ವಾಗತಿಸಿದರು.ಪಟ್ಟೆ ಬಡಗನ್ನೂರು ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ವಂದಿಸಿದರು.

LEAVE A REPLY

Please enter your comment!
Please enter your name here