ಕೆದಂಬಾಡಿ ಗ್ರಾಪಂ ಜಮಾಬಂಧಿ ಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ 2023-24ನೇ ಸಾಲಿನ ಪಂಚಾಯತ್ ಜಮಾಬಂಧಿ ಸಭೆಯು ಸರಕಾರದ ಆದೇಶದಂತೆ ಸೆ.3ರಂದು ಗ್ರಾಪಂ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಮಾಬಂಧಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣರವರು ಸಭೆ ನಡೆಸಿಕೊಟ್ಟರು. ಸಭೆಯಲ್ಲಿ ಗ್ರಾಮ ಪಂಚಾಯತ್‌ನ ಲೆಕ್ಕ ಪತ್ರಗಳ ದಾಖಲೆ ಮತ್ತು ಹಿಂದಿನ ವರ್ಷದಲ್ಲಿ ನಿರ್ವಹಿಸಿದ ಕಾಮಗಾರಿಗಳ ತಪಾಸಭೆ ನಡೆಸಲಾಯಿತು.

ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್ ಬೀಡು, ಸದಸ್ಯರುಗಳಾದ ವಿಠಲ ರೈ ಮಿತ್ತೋಡಿ, ಪ್ರವೀಣ್ ಶೆಟ್ಟಿ ತಿಂಗಳಾಡಿ,ಸುಜಾತ ರೈ, ರೇವತಿ, ಅಸ್ಮಾ ಉಪಸ್ಥಿತರಿದ್ದರು. ಸಭೆಯಲ್ಲಿ ಹಿರಿಯರಾದ ಬೋಳೋಡಿ ಚಂದ್ರಹಾಸ ರೈ, ವಿಜಯ ಕುಮಾರ್ ರೈ ಕೋರಂಗ ಸಹಿತ ಹಲವು ಮಂದಿ ಗಣ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಜಯಂತ ಮೇರ್ಲ, ಗಣೇಶ್, ವಿದ್ಯಾಪ್ರಸಾದ್, ಮೃದುಳಾ, ಶಶಿಪ್ರಭಾ ರೈ ಸಹಕರಿಸಿದ್ದರು.

LEAVE A REPLY

Please enter your comment!
Please enter your name here