ಕಡಬ: ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕೊಂಬಾರು ಮೊಗೇರಡ್ಕ ಶಾಲೆಯ ವಿದ್ಯಾರ್ಥಿಗಳಿಗೆ ಅನ್ಯಾಯ?

0

ಕಡಬ: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಮೊಗೆರಡ್ಕ ಸರಕಾರಿ ಶಾಲೆಯ ಖಾಸಗಿ ತರಬೇತುದಾರರನ್ನು ಪಂದ್ಯಾಟದ ವೇಳೆ ಅಂಕಣದೊಳಗೆ ಬಿಡದೆ ಇತರ ದೈಹಿಕ ಶಿಕ್ಷಣ ಶಿಕ್ಷಕರಿಂದ ಅನ್ಯಾಯವಾಗಿದೆ ಎಂಬ ಆರೋಪ ವ್ಯಕ್ತವಾಗಿದ್ದು ಈ ಬಗ್ಗೆ ಮೊಗೆರಡ್ಕ ಶಾಲಾ ಎಸ್.ಡಿ.ಎಂ.ಸಿ.ಯವರಿಂದ ಜಿಲ್ಲಾಧಿಕಾರಿಯವರಿಗೆ ದೂರು ನೀಡಲಾಗಿದೆ.

ಅಲ್ಲದೆ ಮೊಗೇರಡ್ಕ ಶಾಲೆಯ ವಿದ್ಯಾರ್ಥಿ ಸಿ.ಎಂ.ಕಛೇರಿಗೂ ದೂರವಾಣಿ ಕರೆ ಮಾಡಿ ಅನ್ಯಾಯವಾಗಿದೆ ಎಂದು ದೂರು ನೀಡಿದ್ದು ಈ ಆಡಿಯೋ ಕೂಡ ವೈರಲ್ ಆಗಿದೆ. ಈಗಾಗಲೇ ಈ ಬಗ್ಗೆ ವಿಚಾರಣೆ ನಡೆಸಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆಂದು ತಿಳಿದು ಬಂದಿದೆ.


ಕಬಡ್ಡಿ ಪಂದ್ಯಾಟದ ವೇಳೆ ಕೊಂಬಾರು ಮೊಗೇರಡ್ಕ ಶಾಲೆಯ ವಿದ್ಯಾರ್ಥಿಗಳ ತಂಡದ ಕೋಚ್ ಅವರನ್ನು ಪ್ರಾರಂಭದಲ್ಲಿ ಅಂಕಣದೊಳಗೆ ಹೋಗಲು ಅನುಮತಿ ನಿರಾಕರಿಸಲಾಗಿತ್ತು ಬಳಿಕ ಈ ಬಗ್ಗೆ ಮಾತಿನ ಚಕಮಕಿಗಳು ನಡೆದ ಬಳಿಕ ಅಂಕಣದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತಾದರೂ ವಿವಿಧ ಕಾರಣವೊಡ್ಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಲು ಕೋಚ್ ಅವರಿಗೆ ಸಾಧ್ಯವಾಗಿಲ್ಲ, ಎಂಬ ಆರೋಪ ವ್ಯಕ್ತವಾಗಿದೆ. ಅಲ್ಲದೆ ಈ ಪಂದ್ಯಾಟದಲ್ಲಿ ಎದುರಾಳಿ ತಂಡದ ಕೋಚ್ ಅವರನ್ನು ಒಳಗೆ ಬಿಡಲಾಗಿತ್ತು ಅವರು ಸಲಹೆ ನೀಡುತ್ತಿದ್ದರು ಇದೇ ವಿಚಾರ ಇದೀಗ ವಾದ ಪ್ರತಿವಾದಕ್ಕೆ ಕಾರಣವಾಗಿದೆ.

ದೂರು ಬಂದಿಲ್ಲ, ವರದಿ ತರಿಸುತ್ತೇನೆ- ಬಿ.ಇ.ಒ
ಈ ಬಗ್ಗೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರನ್ನು ಸಂಪರ್ಕಿಸಿದಾಗ ಈ ಬಗ್ಗೆ ಯಾವುದೇ ದೂರು ಬಂದಿಲ್ಲ, ಗುರುವಾರ ವರದಿ ತರಿಸುತ್ತೇನೆ ಎಂದು ಹೇಳಿದ್ದಾರೆ. ಸಿ.ಎಂ.ಕಛೇರಿಗೆ ದೂರವಾಣಿ ಕರೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದಾಗ..ಕರೆ ಯಾರು ಮಾಡಬಹುದು ಆದರೆ ದೂರು ಬರಬೇಕಲ್ಲ? ಎಂದು ಉತ್ತರಿಸಿದ್ದಾರೆ.

LEAVE A REPLY

Please enter your comment!
Please enter your name here