ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

0

ಉಪ್ಪಿನಂಗಡಿ: ಡಾ|ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನದ ಸವಿನೆನಪಿಗಾಗಿ ಸೆ.5ರಂದು ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಗುರುವೃಂದಕ್ಕೆ ಶುಭ ಹಾರೈಸುವ ಭಿತ್ತಿಪತ್ರವನ್ನು ಪುಷ್ಪವೃಷ್ಟಿಯೊಂದಿಗೆ ಅನಾವರಣಗೊಳಿಸುವ ಮೂಲಕ ಶಿಕ್ಷಕರ ದಿನವನ್ನು ವಿನೂತನವಾಗಿ ಉದ್ಘಾಟಿಸಿದರು.

ವಿಜ್ಞಾನ ಶಿಕ್ಷಕಿ ನಿಶಿತಾ ಕೆ.ಕೆ. ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ತಮ್ಮ ಸಹೊದ್ಯೋಗಿ ಬಂಧುಗಳಿಗೆ ಶುಭಹಾರೈಸಿದರು. 10ನೇ ತರಗತಿಯ ಯಶಸ್ವಿ ಶಿಕ್ಷಕರ ದಿನದ ಮಹತ್ವವನ್ನು ತಿಳಿಸಿದರು. ಈ ದಿನದಂದು 10ನೇ ತರಗತಿಯ ವಿದ್ಯಾರ್ಥಿಗಳೇ ಶಾಲಾ ಸಿಬ್ಬಂದಿಗಳಾಗಿ ಕರ್ತವ್ಯವನ್ನು ನಿರ್ವಹಿಸುವ ಮೂಲಕ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ಹೂವು ಹಾಗೂ ನೆನಪಿನ ಕಾಣಿಕೆಯನ್ನು ನೀಡಿ ಆಶೀರ್ವಾದವನ್ನು ಪಡೆದುಕೊಂಡು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದರು.


LEAVE A REPLY

Please enter your comment!
Please enter your name here