ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನಲ್ಲಿ ಸಪ್ಟೆಂಬರ್‌ 05, ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದರು.

ಡಾ| ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವುದರೊಂದಿಗೆ ಸಂಸ್ಥೆಯ ಎಲ್ಲಾ ಶಿಕ್ಷಕರು ಸಮಾರಂಭದಲ್ಲಿ ಭಾಗಿಯಾದರು. ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರಿಗೆ ಉಡುಗೊರೆಯನ್ನು ನೀಡಿ ಗೌರವಿಸಿದರು. ಇದರೊಂದಿಗೆ ಗಾಯನ ಸೇರಿದಂತೆ ಹಲವು ಚಟುವಟಿಕೆಗಳನ್ನು ನಡೆಸಿದರಲ್ಲದೇ, ಶಿಕ್ಷಕರಿಗಾಗಿ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಭೌತಶಾಸ್ತ್ರ ಉಪನ್ಯಾಸಕಿ ಸ್ವಾತಿ ಬಿಎಸ್‌ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅನುಭವವನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಎಚ್‌ ಕೆ ಪ್ರಕಾಶ್‌ ಹಾಗೂ ಎಲ್ಲಾ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ನಿಶಿತ್‌ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here