ನಾಳೆ(ಸೆ.7): ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಸೆ.7ರಂದು ನಡೆಯಲಿದೆ.

ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಸೆ.7ರಂದು ಬೆಳಿಗ್ಗೆ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಲಿದೆ. ಮಧ್ಯಾಹ್ನ ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here