ಬೈಕ್ ಅಪಘಾತ-ರಾಮಕುಂಜದ ಯುವಕ ಸಹಿತ ಇಬ್ಬರು ಮೃತ್ಯು

0

ರಾಮಕುಂಜ: ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಿಯಂತ್ರಣ ತಪ್ಪಿದ ಬೈಕೊಂದು ಉರುಳಿಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಸೆ.5ರ ತಡರಾತ್ರಿ ನಡೆದಿದೆ. ಮೃತರನ್ನು ರಾಮಕುಂಜದ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ.

ಮೃತ ಚೇತನ್ ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ. ಇವರು ಸವಾರಿ ಮಾಡುತ್ತಿದ್ದ ಬೈಕ್ ಲಾರಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here