ಸೆ.7- 9: ಸವಣೂರಿನಲ್ಲಿ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0

ಪುತ್ತೂರು: ಸವಣೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ 42ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವವು ಸೆ.7ರಿಂದ ಸೆ.9ರವರೆಗೆ ಸವಣೂರಿನ ಶ್ರೀ ವಿನಾಯಕ ಸಭಾಭವನದಲ್ಲಿ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ 8.30ಕ್ಕೆ ಪುರೋಹಿತ ಅನಂತರಾಮ ಉಪಾಧ್ಯಾಯರ ನೇತೃತ್ವದಲ್ಲಿ ಗಣೇಶ ಬಿಂಬ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಹಾಗೂ 12 ತೆಂಗಿನಕಾಯಿಯ ಗಣಪತಿ ಹೋಮ, ಭಜನಾ ಕಾರ್ಯಕ್ರಮ, ಕುಣಿತ ಭಜನೆ , ಮಕ್ಕಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.
ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು,ಭರತನಾಟ್ಯ ,ರಾತ್ರಿ ಮಹಾಪೂಜೆ ನಡೆದು ಪ್ರಸಾದ ವಿತರಣೆ ನಡೆಯಲಿದೆ. ಸೆ.8ರಂದು ಬೆಳಿಗ್ಗೆ ಉಷಾ ಪೂಜೆ,ಗಣಪತಿ ಹೋಮ,ಭಜನಾ ಕಾರ್ಯಕ್ರಮ, ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ,ಮಹಾಪೂಜೆ ನಡೆದು ಪ್ರಸಾದ ವಿತರಣೆ ,ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ ಭಜನಾ ಕಾರ್ಯಕ್ರಮ, ದೀಪಾರಾಧನೆ ,ಸಾಂಸ್ಕೃತಿಕ ಸಂಭ್ರಮ ,ಭರತ ನಾಟ್ಯ , ರಾತ್ರಿ ಮಹಾಪೂಜೆ ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.


ಸೆ.9ರಂದು ಬೆಳಿಗ್ಗೆ ಉಷೆ ಪೂಜೆ,ಗಣಪತಿ ಹೋಮ,ಭಜನಾ ಕಾರ್ಯಕ್ರಮ ,ಕುಣಿತ ಭಜನೆ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಮದ್ಯಾಹ್ನ 11.30 ರಿಂದ ಧಾರ್ಮಿಕ ಸಭಾ ಕಾರ್‍ಯಕ್ರಮ, ಬಳಿಕ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ನಡೆಯಲಿದೆ. ಸಂಜೆ 3 ಗಂಟೆಯಿಂದ ಶ್ರೀಗಣಪತಿ ವಿಗ್ರಹದ ಶೋಭಾಯಾತ್ರೆ ನಡೆದು ಸರ್ವೆ ಗೌರಿ ಹೊಳೆಯಲ್ಲಿ ಜಲಸ್ತಂಬನ ನಡೆಯಲಿದೆ ಎಂದು ಸಮಿತಿಯ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ಶಿವರಾಮ ಗೌಡ ಮೆದು,ಕಾರ್ಯದರ್ಶಿ ಸುಧಾಕರ ರೈ ದೇವಸ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here