ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ವತಿಯಿಂದ 35ನೇ ವರ್ಷದ ಗಣೇಶೋತ್ಸವ

0

ಬಡಗನ್ನೂರು: ಸುಳ್ಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ವತಿಯಿಂದ 35ನೇ ವರ್ಷದ ಗಣೇಶೋತ್ಸವವು ಸೆ.7ರಂದು ವಿವಿಧ ಹಾಗೂ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತನು-ಮನ-ಧನಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾರ್ಯಕ್ರಮಗಳು:

ಸೆ.7ರಂದು ಬೆಳಿಗ್ಗೆ ಗಂ 8.30 ಕ್ಕೆ ದೀಪ ಪ್ರಜ್ವಲನೆ. ಸುಳ್ಯಪದವು ಶಬರನಗರ ಸ್ವಾಮಿ ಕೊರಗಜ್ಜಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ ರವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಳಗ್ಗೆ ಗಂ.9 ರಿಂದ ಗಣಪತಿ ಹವನ, ವಿಗ್ರಹ ಪ್ರತಿಷ್ಢೆ. 12.30ರಿಂದ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನ ಭೋಜನ ನಡೆಯಲಿದೆ.ಅಪರಾಹ್ನ ಗಂ 3 ರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂ.5 ರಿಂದ ಬಹುಮಾನ ವಿತರಣೆ ಬಹುಮಾನ ವಿತರಣೆಯನ್ನು ರುಕ್ಮಾಂಗದ ಅಚಾರ್ಯ ಶಬರಿನಗರ ಮಾಡಲಿದ್ದಾರೆ. ಸಂಜೆ ಗಂ 5.15 ರಿಂದ  ಶೋಭಾಯಾತ್ರೆ ಶ್ರೀ ಗಣೇಶ ವಿಗ್ರಹ ಜಲಸ್ತಂಭನೆ ನಡೆಯಲಿದೆ.

ವಿವಿಧ ಸ್ಪರ್ಧೆಗಳು:
ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ ಗಂ.10ರಿಂದ ಸಾರ್ವಜನಿಕ ವಾಲಿಬಾಲ್ ಪಂದ್ಯಾಟ ನಡೆಯಲಿದೆ.10.30 ರಿಂದ ಶಾಲಾ ವಿದ್ಯಾರ್ಥಿಗಳಿಗೆ ಗಣೇಶ ಭಕ್ತಿ ಗೀತೆ  ಮತ್ತು ಚಿತ್ರ ಬಿಡಿಸುವ ಸ್ಪರ್ಧೆ ಅಪರಾಹ್ನ 1.30 ರಿಂದ ಪುರುಷರಿಗೆ ಮತ್ತು ಮಹಿಳೆಯರಿಗೆ  ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ.

LEAVE A REPLY

Please enter your comment!
Please enter your name here