ನಾಳೆಯಿಂದ ಪುರುಷರಕಟ್ಟೆಯಲ್ಲಿ 24ನೇ ವರ್ಷದ ಗಣೇಶೋತ್ಸವ ಸಂಭ್ರಮ

0

ಪುತ್ತೂರು: ಪುರುಷರಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7ರಿಂದ ಪ್ರಾರಂಭಗೊಂಡು ಸೆ.9ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪುರುಷರಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗದಲ್ಲಿ ಸಂಭ್ರಮಿಸಲಿದೆ.

ಸೆ.7ರಂದು ಬೆಳಿಗ್ಗೆ ಶ್ರೀಗಣೇಶನ ವಿಗ್ರಹ ಪ್ರತಿಷ್ಠೆ, ಪ್ರಾರ್ಥನೆ, ಗಣಪತಿ ಹೋಮ, ಸ್ಥಳ ಶುದ್ದಿಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಅಪರಾಹ್ನ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸಂಜೆ ಪುರುಷರಕಟ್ಟೆ ಶ್ರೀದೇವಿ ಭಜನಾ ಮಂಡಳಿಯವರಿಂದ ಭಜನೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದ ಬಳಿಕ ಬಂಗಾರ್ ಕಲಾವಿದೆರ್ ಪುತ್ತೂರು ಇವರಿಂದ ಮನಸ್ಸ್ ಎನ್ನಿಲೆಕ ಎಂಬ ತುಳು ನಾಟಕ ನಡೆಯಲಿದೆ.


ಸೆ.8ರಂದು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶಾಂತಿಗೋಡು ಕೂಡುರಸ್ತೆ ಶ್ರೀದುರ್ಗಾ ಭಜನಾ ಮಂಡಳಿಯವರಿಂದ ಭಜನೆ, ರಾತ್ರಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು, ರಾತ್ರಿ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ರವಿ ಮಾಯಂಗಲ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಹಿಂದೂ ಧಾರ್ಮಿಕ ಮುಖಂಡ ಅರುಣ್ ಕುಮಾರ್ ಪುತ್ತಿಲ, ನರಿಮೊಗರು ಗ್ರಾ.ಪಂ ಅಧ್ಯಕ್ಷೆ ಹರಿಣಿ ನಿತ್ಯಾನಂದ, ಉಪಾಧ್ಯಕ್ಷ ಉಮೇಶ್ ಇಂದಿರಾನಗರ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ., ನಿರ್ದೇಶಕ ಪರಮೇಶ್ವರ ಭಂಡಾರಿ, ಗಣೇಶೋತ್ಸವ ಸಮಿತಿ ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ ಪುರುಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿಷ್ಣು ಕಲಾವಿದೆರ್ ಕಳೆಂಜ ಬೆಳ್ಳಾರೆ ಅಭಿನಯದ ಅಗ್ಗಿನಾತ್ ಮುಗ್ಯುಜಿ ಎಂಬ ತುಳು ಹಾಸ್ಯ ಮಯ ನಾಟಕ ಪ್ರದರ್ಶನಗೊಳ್ಳಲಿದೆ.


ಸೆ.9ರಂದು ಶೋಭಾಯಾತ್ರೆ:
ಗಣೇಶೋತ್ಸವದಲ್ಲಿ ಮೂರನೇ ದಿನವಾದ ಸೆ.9ರಂದು ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಅಪರಾಹ್ನ ಮಜಲುಮಾರು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಹಾಗೂ ಪುರುಷರಕಟ್ಟೆ ಇಂದಿರಾನಗರ ಶ್ರೀವನದುರ್ಗಾ ಭಜನಾ ಮಂಡಳಿಯವರಿಂದ ಭಜನೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಗಣೇಶ ವಿಗ್ರಹ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ಪುರುಷರಕಟ್ಟೆಯಿಂದ ಹೊರಟು ಇಂದಿರಾನಗರ, ಕೂಡುರಸ್ತೆ ಮಾರ್ಗವಾಗಿ ಸಂಚರಿಸಿ ಕಲ್ಕಾರ್‌ನಲ್ಲಿ ಜಲಸ್ತಂಭನಗೊಳ್ಳುವ ಮೂಲಕ ಗಣೇಶೋತ್ಸವವು ಸಂಪನ್ನಗೊಳ್ಳಲಿದೆ ಎಂದು ಸಮಿತಿ ಅಧ್ಯಕ್ಷ ರವಿ ಮಾಯಂಗಲ, ಕಾರ್ಯದರ್ಶಿ ಸಂತೋಷ್ ಎಂ. ಮುಕ್ವೆ ಹಾಗೂ ಕೋಶಾಧಿಕಾರಿ ಕಾರ್ತಿಕ್ ಪೂಜಾರಿ ಇಂದಿರಾನಗರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here