ಪಡುಮಲೆ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಪಡುಮಲೆ ಜೀರ್ಣೋದ್ಧಾರ ಕಾರ್ಯಕ್ಕೆ ಧನಸಹಾಯ

0

ಬಡಗನ್ನೂರು:  ವರಮಹಾಲಕ್ಷ್ಮಿ ಪೂಜಾ ಸಮಿತಿ ಪಡುಮಲೆ ಇದರ 2024 ನೇ  ವರ್ಷದ ಉಳಿಕೆ ಮೊತ್ತ ರೂ  75160/- ನ್ನು  ಶ್ರೀ ಕ್ಷೇತ್ರದ ಜೀರ್ಣೋದ್ದಾರ ಕಾರ್ಯಕ್ಕೆ (ತೀರ್ಥ ಮಂಟಪದ ಪೂರ್ವ ಪಶ್ಚಿಮ  ಭಾಗದಲ್ಲಿ ಮೇಲ್ಚಾವಣಿ ಹೊದಿಕೆ ನಿರ್ಮಾಣಕ್ಕೆ )  ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಸಿ ಯಚ್ ರವರಿಗೆ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಸವಿತಾ ಗೆಜ್ಜೆಗಿರಿ ಮತ್ತು ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು  ಹಸ್ತಾಂತರಿಸಿದರು.

ಈ ಸಂದರ್ಭ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು   ಜೀರ್ಣೋದ್ದಾರ ಸಮಿತಿಯ ಸದಸ್ಯರು, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಊರ ಭಕ್ತಾದಿಗಳು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here