ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾಲಯದಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.


ಮಕ್ಕಳಿಂದ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಶಿಕ್ಷಕರಿಗಾಗಿ ಮನೋರಂಜನಾ ಆಟಗಳನ್ನು ನಡೆಸಲಾಯಿತು. ಶಾಲಾ ಕಾರ್ಯದರ್ಶಿ ಕೆ.ಸೇಸಪ್ಪ ರೈ, ಸಂಚಾಲಕ ಶಿವಪ್ರಸಾದ್ ಆಚಾರ್ಯ, ಶಾಲಾ ಆಡಳಿತ ಮಂಡಳಿ ಸದಸ್ಯ ಎಮ್. ಸತೀಶ್ ಭಟ್‌ರವರು ಮಾತನಾಡಿ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿ ಶುಭಹಾರೈಸಿದರು. ವಿದ್ಯಾರ್ಥಿಗಳಾದ ನಂದನ್ ಗೋಪಾಲ್ ಮತ್ತು ಪೃಥ್ವಿರಾಜ್ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು.


ಸನ್ಮಾನ:
ನಿವೃತ್ತ ಪ್ರಾಂಶುಪಾಲ, ಶಾಲಾ ಆಡಳಿತ ಮಂಡಳಿ ಸದಸ್ಯರೂ ಆದ ಎಂ. ಸತೀಶ್ ಭಟ್, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಶಾಲಾ ಕಾರ್ಯದರ್ಶಿಯೂ ಆದ ಕೆ.ಸೇಸಪ್ಪ ರೈಯವರ ಸೇವಾ ವೃತ್ತಿಯನ್ನು ನೆನೆದು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಪ್ರಾಂಶುಪಾಲ ಪ್ರವೀದ್ ಪಿ.,ಉಪಸ್ಥಿತರಿದ್ದರು. ಎಂಟನೇ ತರಗತಿಯ ಶ್ರೇಷ್ಠ ಪಿ.ವಿ.ಮತ್ತು ಅಮೃತ್ ಜಿ. ಕಾರ್ಯಕ್ರಮ ನಿರೂಪಿಸಿದರು. ಅಮೃತ್ ಜಿ ಸ್ವಾಗತಿಸಿದರು. ಚೇತನ್ ವಂದಿಸಿದರು.

LEAVE A REPLY

Please enter your comment!
Please enter your name here