ಬಲ್ನಾಡು ಬೆಳಿಯೂರು ಕಟ್ಟೆ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

0

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಿಯೂರು ಕಟ್ಟೆ ಬಲ್ನಾಡು ಇಲ್ಲಿನ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಇಲ್ಲಿನ ಶ್ರೀ ರಾಮ ಸಮುದಾಯ ಭವನದಲ್ಲಿ ಭಕ್ತಿ-ಭಾವ ಸಂಭ್ರಮದಿಂದ ನಡೆಯಿತು.

ಅರ್ಚಕರಾದ ಎ ಪಿ ಸುರೇಶ್ ಅಡಿಗ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮವನ್ನು ಭಜನಾ ಮಂದಿರದ ಅಧ್ಯಕ್ಷರಾದ ಜಯರಾಮ ಹಸಂತಡ್ಕ ಉದ್ಘಾಟಿಸಿದರು. ಬಳಿಕ ಭಜನಾ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯಿತು.

ಮಹಾ ಪೂಜೆಯ ಸಂದರ್ಭ ಮುರಳಿ ಕೃಷ್ಣ ಹಸಂತಡ್ಕ, ಪ್ರವೀಣ ಚಂದ್ರ ಆಳ್ವ ಸೇರಿದಂತೆ ಹಲವಾರು ಗಣ್ಯರು ಹಾಗೂ ಭಕ್ತವೃಂದದವರು ಉಪಸ್ಥಿತರಿದ್ದರು. ಸಂಜೆ ವೈಭವದ ಶೋಭಾಯಾತ್ರೆ ನಡೆದು ಶ್ರೀ ದೇವರ ಜಲಸ್ಥಂಭನ ನಡೆಯಲಿದೆ.

LEAVE A REPLY

Please enter your comment!
Please enter your name here