ಮಾಡಾವು:ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ

0

ಕೆಯ್ಯೂರು: ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟವು ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ಸೆ.8ರಂದು ನಡೆಯಿತು.

ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಶಶಿಧರ ರಾವ್ ಬೊಳಿಕ್ಕಳ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ,ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ವಸಂತ ವಿ ರೈ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ರಮೇಶ್ ರೈ ಬೊಳೋಡಿ, ಜಿಲ್ಲಾ ಯುವ ಪ್ರಶಸ್ತಿ ವಿಜೇತ ರಾಜೇಶ್ ಮಯೂರ ಮಜ್ಜಾರಡ್ಕ, ಶ್ರೀ ದುರ್ಗಾ ಸ್ಪೋರ್ಟ್ಸ್ ಕ್ಲಬ್ ಕೆಯ್ಯೂರು  ಅಧ್ಯಕ್ಷ ಪ್ರವೀಣ್ ಕಟ್ಟತ್ತಾರು, ಅಯ್ಯಪ್ಪ ಭಜನಾ ಮಂದಿರ ಮಾಡಾವು ಅಧ್ಯಕ್ಷ  ರವೀಂದ್ರ ರೈ ನೆಲ್ಯಾಜೆ, ಅಯ್ಯಪ್ಪ  ಭಕ್ತವೃಂದ  ಮಾಡಾವು ಅಧ್ಯಕ್ಷ ಕೃಷ್ಣಮೂರ್ತಿ ವಿ ಎಸ್, ಕಾರ್ಯದರ್ಶಿ ವಿನೋದ್ ಕೊಡ್ಲೆ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಭಗವದ್ಗೀತಾ 12ನೇ ಅಧ್ಯಾಯದ  ಶ್ಲೋಕವನ್ನು ಕುಮಾರಿ ಮಾನ್ವಿ ಪಠಣೆ ಮಾಡಿದರು. ಪ್ರಶ್ವಿ ಪ್ರಾರ್ಥನೆಯೊಂದಿಗೆ. ನಮಿತಾ ರೈ ಸ್ವಾಗತಿಸಿ, ಸೌರವ್ ಬೊಳಿಕಲಸುಳ್ಯ ವಂದಿಸಿ, ಬಾಸ್ಕರ ರೈ ಮಠ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here