ಇಂದು ತ್ಯಾಗರಾಜನಗರದಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಧಾರ್ಮಿಕ ಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿರುವ ಹಿಂದೂ ಜಾಗರಣ ವೇದಿಕೆಯ 22ನೇ ವಾರ್ಷಿಕ ಸಮಾರಂಭದ ಪ್ರಯುಕ್ತ ಸಾಮೂಹಿಕ ಗಣಪತಿ ಹವನವು ಸೆ.7ರಂದು ತ್ಯಾಗರಾಜನಗರದಲ್ಲಿ ನಡೆದಿದ್ದು ಸೆ .9 ರಂದು ಸಂಜೆ ಭಜನಾ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭೆ ನಡೆಯಲಿದೆ.

ಉಪನ್ಯಾಸಕರಾದ ರವೀಶ್ ಪಡುಮಲೆಯವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಸಭೆಯ ಬಳಿಕ ತಿಂಗಳಾಡಿ ಶ್ರೀ ದೇವತಾ ಭಜನ ಮಂದಿರದಲ್ಲಿ ಪೂಜಿಸಲ್ಪಟ್ಟ ಶ್ರೀ ಗಣೇಶ ವಿಗ್ರಹದ ಮೆರವಣಿಗೆಯನ್ನು ಬರಮಾಡಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿಂದೂ ಜಾಗರಣ ವೇದಿಕೆಯ ಸಂಯೋಜಕ ಭವಿತ್ ಪಯಂದೂರು, ಸಹ ಸಂಯೋಜಕ ಲೋಕೇಶ್ ಸ್ವಾಮಿನಗರ ಹಾಗೂ ಸದಸ್ಯರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here