ಕೂರೇಲು ಮಲರಾಯ ದೈವಸ್ಥಾನದಲ್ಲಿ ಶ್ರಮದಾನ

0

ಪುತ್ತೂರು: ಆರ್ಯಾಪು ಗ್ರಾಮದ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ಸೆ.12 ರಂದು ನಡೆಯಲಿರುವ ಶ್ರೀ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಶ್ರೀ ನಾಗದೇವರ ಶಿಲಾ ಪ್ರತಿಷ್ಠಾ ಬ್ರಹ್ಮಕಲಶ ಕಾರ್ಯಕ್ರಮದ ಅಂಗವಾಗಿ ಸೆ.8 ರಂದು ದೈವಸ್ಥಾನದಲ್ಲಿ ಶ್ರಮದಾನ ನಡೆಯಿತು.

ಶ್ರಮದಾನದಲ್ಲಿ ಕೂರೇಲು ತರವಾಡು ಕುಟುಂಬದ ಸದಸ್ಯರು, ಬಂಧುಮಿತ್ರರು ಸೇರಿದಂತೆ ಸುಮಾರು 50 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ ಉಪಹಾರ ಸೇರಿದಂತೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಕೂರೇಲು ಶ್ರೀ ಮಲರಾಯ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here