ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಪುತ್ತೂರು ಶಾಖೆಯ ನವೀಕೃತ ಹವಾನಿಯಂತ್ರಿತ ಶಾಖಾ ಕಚೇರಿ ಸೆ.11ರಂದು ಉದ್ಘಾಟನೆ

0

ಪುತ್ತೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಪುತ್ತೂರಿನಲ್ಲಿ ಕಳೆದ 28 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ. (Sri Ramakrishna Credit Co-Operative Society Ltd.) ಇದರ ನವೀಕೃತ ಹವಾನಿಯಂತ್ರಿತ ಶಾಖಾ ಕಚೇರಿಯ ಉದ್ಘಾಟನಾ ಸಮಾರಂಭ ಸೆ.11ರ ಬುಧವಾರದಂದು ನಡೆಯಲಿದೆ.

ಇಲ್ಲಿನ ಬಸ್‌ ಸ್ಸ್ಟಾಂಡ್ ಬಳಿ ಇರುವ ಅಮರ್ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸೊಸೈಟಿಯ ಈ ನವೀಕೃತ ಹವಾನಿಯಂತ್ರಿತ ಶಾಖಾ ಕಚೇರಿಯನ್ನು ಪುತ್ತೂರು ನಗರಸಭೆಯ ಪೌರಾಯುಕ್ತರಾಗಿರುವ ಮಧು ಎಸ್. ಮನೋಹರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು, ಇದರ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ವಹಿಸಿಕೊಳ್ಳಲಿದ್ದಾರೆ. ಆದರ್ಶ ಆಸ್ಪತ್ರೆಯ ಖ್ಯಾತ ವೈದ್ಯರಾಗಿರುವ ಡಾ| ಪ್ರಸಾದ್ ಭಂಡಾರಿ ಮತ್ತು ಶಾಖಾ ಕಚೇರಿ ಕಟ್ಟಡ ಅಮರ್ ಕಾಂಪ್ಲೆಕ್ಸ್ ನ ಮಾಲಕರಾಗಿರುವ ಅಮಿತಾ ಪಿ. ರೈ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುತ್ತೂರು ಶಾಖಾ ಉಸ್ತುವಾರಿ ನಿರ್ದೇಶಕರಾಗಿರುವ ಹಾಗೂ ಸಂಘದ ನಿರ್ದೇಶಕರಾಗಿರುವ ಕೆ. ಸೀತಾರಾಮ ರೈ ಸವಣೂರು ಹಾಗೂ ಪುತ್ತೂರು ಶಾಖಾ ಸಲಹಾ ಸಮಿತಿ ಅಧ್ಯಕ್ಷರಾಗಿರುವ ಹಾಗೂ ಸಂಘದ ನಿರ್ದೇಶಕರಾಗಿರುವ ಅರಿಯಡ್ಕ ಚಿಕ್ಕಪ್ಪ ನಾೖಕ್, ಸಂಘದ ನಿರ್ದೇಶಕರುಗಳು ಹಾಗೂ ಪುತ್ತೂರು ಶಾಖಾ ಸಲಹಾ ಸಮಿತಿ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ಹೊಂದಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷರಾಗಿರುವ ಕೆ. ಜೈರಾಜ್ ಬಿ. ರೈ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here