ಕಾಣಿಯೂರು ಗ್ರಾ.ಪಂ.ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸಂಸದರಿಗೆ ಮನವಿ

0

ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಒದಗಿಸುವಂತೆ ದ. ಕ ಸಂಸದ ಕ್ಯಾ| ಬ್ರಿಜೇಶ್ ಚೌಟರವರಿಗೆ ಮನವಿ ಮಾಡಲಾಗಿದೆ. ದೋಳ್ಪಾಡಿ ಗ್ರಾಮದ ದೋಳ್ಪಾಡಿ -‌ ಕಟ್ಟ ಸಂಪರ್ಕ ರಸ್ತೆ, ಚಾರ್ವಾಕ ಗ್ರಾಮದ ಅಯೋಧ್ಯ ನಗರದಿಂದ- (ಕಪಿಲೇಶ್ವರ ದೇವಸ್ಥಾನದ ಬಳಿ) ಕಪಿಲ ನಗರಕ್ಕೆ ಸಂಪರ್ಕಿಸುವ ರಸ್ತೆ, ಮತ್ತು ಕಾಣಿಯೂರು ಗ್ರಾಮದ ಬೊಬ್ಬೆಕೇರಿಯಿಂದ – ನಾವೂರು ದೇವಾಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಗ್ರಾಮ ಸಡಕ್ ಯೋಜನೆಯಲ್ಲಿ ಅಳವಡಿಸಿ ಅಭಿವೃದ್ಧಿ ಪಡಿಸಲು ಅನುದಾನ ಒದಗಿಸಬೇಕು ಹಾಗೂ ದೋಳ್ಪಾಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿ ಎಸ್ ಎನ್ ಎಲ್ ಟವರ್ ನ್ನು ಅತೀ ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸುವಂತೆ ಸುಳ್ಯ ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಗಣೇಶ್ ಕೆ‌ ಎಸ್ ಉದನಡ್ಕ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಪ್ರಧಾನ ಕಾರ್ಯದರ್ಶಿಯಾದ ಪ್ರದೀಪ್ ಮನವಳಿಕೆ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಆಶಾ ತಿಮ್ಮಪ್ಪ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here