ನೆಲ್ಯಾಡಿ: ಜೇಸಿ ಸಪ್ತಾಹ- ಆಶ್ರಮ ಭೇಟಿ

0

ನೆಲ್ಯಾಡಿ: ಜೇಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್ ನೆಲ್ಯಾಡಿ ಇದರ ಆಶ್ರಯದಲ್ಲಿ ನಡೆಯುವ 41ನೇ ವರ್ಷದ ಜೇಸಿ ಸಪ್ತಾಹ ’ಡೈಮಂಡ್-2024’ ಅಂಗವಾಗಿ ಸೆ.9ರಂದು ಸಂಜೆ ಕೊಪ್ಪ ಪ್ರಶಾಂತ ನಿವಾಸ ಆಶ್ರಮ ಭೇಟಿ ಕಾರ್ಯಕ್ರಮ ನಡೆಯಿತು. ಈ ವೇಳೆ ಆಶ್ರಮವಾಸಿಗಳಿಗೆ ಯೋಗ ಪ್ರಾತ್ಯಕ್ಷಿಕೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಣ್ಣುಹಂಪಲು ವಿತರಣೆ ಮಾಡಲಾಯಿತು.


ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಜೇಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಅವರು ಸ್ವಾಗತಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ನೆಲ್ಯಾಡಿ ಜೇಸಿಐನ ಪೂರ್ವಾಧ್ಯಕ್ಷರಾದ ಆರ್.ವೆಂಕಟ್ರಮಣ, ಜನಾರ್ದನ ಟಿ.,ಅವರು ಮಾಹಿತಿ ನೀಡಿ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಕೊಪ್ಪ ಪ್ರಶಾಂತ ನಿವಾಸ ಆಶ್ರಮದ ಸಿ| ತೆರೆಜಾ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗೋಳಿತ್ತೊಟ್ಟು ಶಾಖಾ ವ್ಯವಸ್ಥಾಪಕ ರತ್ನಾಕರ ಬಂಟ್ರಿಯಾಲ್, ಅಶ್ವಮೇಧ ಕ್ಯಾಟರಿಂಗ್‌ನ ರತ್ನಾಕರ ಶೆಟ್ಟಿ ಕೊಲ್ಯೊಟ್ಟು, ಎಸ್‌ಕೆಡಿಆರ್‌ಪಿ ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಕೆ.ಜೆ., ಆಶಾ ಕಾರ್ಯಕರ್ತೆ ವಿಜಯತುಕರಾಮ ರೈ, ಜೆಸಿಐ ವಲಯಾಧಿಕಾರಿ ದಯಾಕರ ರೈ ಯಮ್., ಯೋಜನಾ ನಿರ್ದೇಶಕರಾದ ಪುರಂದರ ಗೌಡ ಡೆಂಜ, ಜಯಾನಂದ ಬಂಟ್ರಿಯಾಲ್, ಮಹಿಳಾ ಜೇಸಿ ಅಧ್ಯಕ್ಷೆ ಲೀಲಾಮೋಹನ್, ಜೆಜೆಸಿ ಅಧ್ಯಕ್ಷರಾದ ಶಮಂತ್, ವೈಷ್ಣವಿ, ನೆಲ್ಯಾಡಿ ಜೇಸಿಐ ಪೂರ್ವಾಧ್ಯಕ್ಷ ಗಣೇಶ್ ಕೆ.ರಶ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ಜೇಸಿಐ ಕಾರ್ಯದರ್ಶಿ ಆನಂದ ಅಜಿಲ ವಂದಿಸಿದರು.

ಗೌರವಾರ್ಪಣೆ:
ಆಶಾ ಕಾರ್ಯಕರ್ತೆ ವಿಜಯ ತುಕರಾಮ ರೈ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅತಿಥಿಗಳಿಗೆ ಶಾಲು ಹಾಕಿ, ಹೂ ನೀಡಿ ಗೌರವಿಸಲಾಯಿತು. ಜೆಸಿ ಸದಸ್ಯರು ಹಾಗೂ ಆಶ್ರಮವಾಸಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನೆಲ್ಯಾಡಿ ಜೇಸಿಐ ಪೂರ್ವಾಧ್ಯಕ್ಷ ಗಣೇಶ್ ಕೆ.ರಶ್ಮಿ ಆತಿಥ್ಯ ನೀಡಿದರು.

LEAVE A REPLY

Please enter your comment!
Please enter your name here