ಕೆಮ್ಮಾಯಿಯಲ್ಲಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

0

ಪುತ್ತೂರು: ಕೆಮ್ಮಾಯಿಯಲ್ಲಿ ನೂತನವಾಗಿ ಪ್ರಯಾಣಿಕರ ತಂಗುದಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಸೆ.11 ರಂದು ನಡೆಯಿತು.


ಕೌಶಲ್ ಮಿಡಿಯಾ ಇವರ ಪ್ರಾಯೋಜಕತ್ವದಲ್ಲಿ ಹಾಗೂ ನಗರ ಸಭೆಯ ಸಹಕಾರದಿಂದ ನಿರ್ಮಾಣಗೊಳ್ಳುತ್ತಿರುವ ಬಸ್ ಪ್ರಯಾಣಿಕರ ತಂಗುದಾಣ ನಿರ್ಮಾಣಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು‌.

ನಗರ ಸಭೆಯ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ ಕೃಷ್ಣನಗರ, ಉಪಾಧ್ಯಕ್ಷ ಬಾಲಚಂದ್ರ, ಸ್ಥಾಯಿ ಸಮಿತಿಯ ನಿಯೋಜಿತ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ನಗರ ಸಭೆಯ ಮಾಜಿ ಉಪಾಧ್ಯಕ್ಷೆ ವಿದ್ಯಾ ಗೌರಿ, ಕೌಶಲ್ ಮಿಡಿಯಾದ ಕೌಶಲ್, ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷ ದಯಾನಂದ ಗೌಡ ಕೆಮ್ಮಾಯಿ, ಬಿಜೆಪಿ ಪುತ್ತೂರು ನಗರ ಮಂಡಲದ ಅಧ್ಯಕ್ಷ ಶಿವಕುಮಾರ್, ಮಹಿಳಾ ಮೋರ್ಚಾದ ಅಧ್ಯಕ್ಷೆ ಸ್ವರ್ಣಾ ಲತಾ ಹೆಗ್ಡೆ, ಬೂತ್ ಅಧ್ಯಕ್ಷ ಪ್ರಶಾಂತ್ ಕೆಮ್ಮಾಯಿ , ನಲ್ಕ ಗೋಪಾಲಕೃಷ್ಣ ಆಚಾರ್ಯ, ಹಸೈನಾರ್ ಕೆಮ್ಮಾಯಿ, ಪಂಚಾಯತ್ ಸದಸ್ಯ ತಿಮ್ಮಪ್ಪ ಪೂಜಾರಿ ಮತ್ತು ಕೆಮ್ಮಾಯಿ ಪಾರ್ಕಿಂಗ್ ನ ರಿಕ್ಷಾ ಚಾಲಕ ಹಾಗೂ ಮಾಲಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here